ಹುಬ್ಬಳ್ಳಿ: ಪ್ರೇಮ ವೈಫಲ್ಯದ ಹಿನ್ನೆಲೆ ಯುವಕನೋರ್ವ ಗುಡಿಹಾಳ ಬ್ರಿಡ್ಜ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕಿಕೊಂಡ ಘಟನೆ ಈಗಷ್ಟೇ ನಡೆದಿದೆ.
ನಗರದ ಹೆಗ್ಗೆರಿಯ ಜಗದೀಶ್ ನಗರ ನಿವಾಸಿ 21 ವರ್ಷದ ಅವಿನಾಶ್ ಮೂದಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವತಿಯು ಪ್ರೇಮದ ವಿಷಯದಲ್ಲಿ ನಿರಾಕರಣೆ ಮಾಡಿದ ವಿಚಾರಕ್ಕೆ ಮನನೊಂದು ಸಾವಿನ ಹಾದಿ ಹಿಡಿದಿದ್ದಾನೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಪೊಲೀಸರ ತನಿಖೆ ಬಳಿಕ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಸದ್ಯ ಸ್ಥಳಕ್ಕೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಬೇಟಿ ನೀಡಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನೂ ಸಾವಿಗೀಡಾದ ಯುವಕ ಶವವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.