ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕರ ಗುಂಪೊಂದು ಮೂರು ಜನರ ಮೇಲೆ ಹಲ್ಲೆ ಮಾಡಿರುವ ಘಟನೆ ಬಿಡನಾಳದ ಕೆಎಲ್ಇ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.
ಗಾಯಗೊಂಡವರನ್ನು ಬಿಹಾರ್ ಮೂಲದ ಸಂತೋಷ (54), ಬಚ್ಚು (40), ಬಿಕ್ರಮ (34) ಎಂದು ಗುರುತಿಸಲಾಗಿದೆ. ಇಂದು ಹೊಸ ವರ್ಷದ ನಿಮಿತ್ತವಾಗಿ ಕೆಲಸಕ್ಕೆ ರಜೆ ಇದ್ದ ಹಿನ್ನೆಲೆಯಲ್ಲಿ ತಾವು ವಾಸಿಸುತ್ತಿದ್ದ ಸ್ಥಳದಲ್ಲಿದ್ದ ವೇಳೆ ನೀರಿನ ವಿಚಾರಕ್ಕೆ ಅದೇ ಕೆಎಲ್ಇ ಸಂಸ್ಥೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ವೇಳೆ ಹತ್ತಾರು ಜನರ ಗುಂಪು ಏಕಾಏಕಿ ದಾಳಿ ಮಾಡಿ ಮಾಡಿದೆ.

ಈ ವೇಳೆ ಕಟ್ಟಿಗೆಯಿಂದ ಹಲ್ಲೆ ಮಾಡಿದ ಪರಿಣಾಮ ಸಂತೋಷ, ಬಚ್ಚು ಎಂಬಾತನಿಗೆ ಗಂಭೀರವಾಗಿ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ ವಿಷಯ ತಿಳಿದು ಕಿಮ್ಸ್ ಆಸ್ಪತ್ರೆಗೆ ಕಸಬಾಪೇಟೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.