ಧಾರವಾಡ: ಬೈಕ್ ಹಾಗೂ ಲಾರಿ ಮದ್ಯ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅಳ್ನಾವರ ರಸ್ತೆಯ ಹೊನ್ನಾಪುರ ಬಸ್ ನಿಲ್ದಾಣದ ಬಳಿ ನಡೆದಿದೆ.

ಮೃತ ಯುವಕನನ್ನು ಧಾರವಾಡ ಕಲಕೇರಿ ನಿವಾಸಿ ಲೋಹಿತ್ ರಾಟೊಳ್ಳಿ 24 ಎಂದು ತಿಳಿದುಬಂದಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ಆಸ್ಪತ್ರೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡ ತನಿಖೆ ನಡೆಸುತ್ತಿದ್ದಾರೆ.